ಮಂಡ್ಯ : ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮೂರ್ಛೆ ರೋಗಿಯೊಬ್ಬರು ನರಳಿ ನರಳಿ ಪ್ರಾಣ ಬಿಟ್ಟ ಘಟನೆಯೊಂದು ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮೈಸೂರು (Mysuru) ಹಾಗೂ ಮಂಡ್ಯ (Mandya) ನಡುವಿನ ರೈಲು (Train) ಪ್ರಯಾಣದಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ (83) ಸಾವನ್ನಪ್ಪಿದ ವ್ಯಕ್ತಿ. ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಸ್ವಾಮಿ ಪ್ರಯಾಣಿಸುತ್ತಿದ್ದರು. ಅವರು ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದಾರೆ. ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ, ಚಿಕಿತ್ಸೆ ಕೊಡಿಸಲು ಸಿಬ್ಬಂದಿ ಬಂದಿಲ್ಲ. ರೋಗಿಗೆ ಚಿಕಿತ್ಸೆ ನೀಡದೆ, ಮಂಡ್ಯಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ, ಈ ವ್ಯಕ್ತಿ ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರೈಲಿನ ಎಲ್ಲ ನಿಲ್ದಾಣದಲ್ಲಿಯೂ ರೈಲ್ವೆ ಪೊಲೀಸರಿಗೂ ತಿಳಿಸಿದರೆ ಚಿಕಿತ್ಸೆ ಕೊಡಿಸಲಿಲ್ಲ ಎಂದು ಸಹ ಪ್ರಯಾಣಿಕರು ಆರೋಪ ಮಾಡಿದ್ದಾರೆ.