Kornersite

Entertainment Just In Sandalwood

Dali Dhananjaya: ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ!

ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದಾರೆ.

ಧನಂಜಯ್ ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೆನಹಳ್ಳಿ ಗ್ರಾಮದಲ್ಲಿ ಅವಿಭಕ್ತ ಕುಟುಂಬದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಲ್ಲಿ ತಮ್ಮ ತಂದೆಯೊಂದಿಗೆ ಹಳ್ಳಿಯಲ್ಲಿ ನಾಟಕ ನೋಡುತ್ತಾ, ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದರು. ಸದ್ಯ ಅವಮಾನ. ಟೀಕೆಗಳನ್ನೆಲ್ಲ ಮೆಟ್ಟಿ ಸಾಧನೆಯ ಉತ್ತುಂಗಕ್ಕೆ ಏರಿದ್ದಾರೆ.

ಸಾಫ್ಟವೇರ್ ಇಂಜಿನಿಯರ್ ಆಗಿದ್ದ ಧನಂಜಯ್ ತಮ್ಮ ಕೆಲಸಕ್ಕೆ ಗುಡ್ ಬೈ ಹೇಳಿ, ಗುರು ಪ್ರಸಾದ್ ನಿರ್ದೇಶಧನ ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮೂಲಕ ಬೆಳ್ಳೆ ತೆರೆಗೆ ಪಾದಾರ್ಪಣೆ ಮಾಡಿದ್ದರು. ಆದರೆ, ಈ ಸಿನಿಮಾ ಅಂದುಕೊಂಡಂತೆ ಡಾಲಿಗೆ ಹೆಸರು ತಂದು ಕೊಡಲಿಲ್ಲ. ಆ ನಂತರ ಧನಂಜಯ್ ರಾಟೆ, ಬಾಕ್ಸರ್, ಜೆಸ್ಸಿ, ಬದ್ಮಾಶ್, ಎರಡನೆ ಸಲ್, ಅಲ್ಲಮ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡರು. ಆದರೂ ಸುದ್ದಿಯಾಗಲಿಲ್ಲ. 2018ರಲ್ಲಿ ಟಗರು ಚಿತ್ರ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತು.

ಈ ಚಿತ್ರದಲ್ಲಿ ಡಾಲಿ ಎಂಬ ವಿಲನ್ ಆಗಿ ಕಾಣಿಸಿಕೊಂಡ ಧನಂಜಯ್, ಮೊದಲ ಬಿಗೆ ದೊಡ್ಡ ಯಶಸ್ಸು ಕಂಡುಕೊಂಡರು. ಅಷ್ಟೇ ಅಲ್ಲ ಅವರ ಸಿನಿಮಾ ಬದುಕಿಗೆ ದೊಡ್ಡ ತಿರುವು ಕೂಡ ಸಿಕ್ಕಿತು. ಆಗಲೇ ಧನಂಜಯ್ ಡಾಲಿ ಧನಂಜಯ್ ಆದರು. ಹೀಗೆ ಹತ್ತಾರು ಏಳು ಬೀಳುಗಳನ್ನು ಕಂಡ ಧನಂಜಯ್, ಈಗ ಸ್ಟಾರ್ ನಟರ ಪಟ್ಟಿಯಲ್ಲಿದ್ದಾರೆ.

ತಾವೇ ಒಂದು ಕಾಲದಲ್ಲಿ ನಿರ್ದೇಶಕ, ನಿರ್ಮಾಪಕರ ಬಳಿ ಹೋಗಿ ಅವಕಾಶಕ್ಕಾಗಿ ಅಂಗಲಾಚುತ್ತಿದ್ದ ಡಾಲಿ ಬಳಿಯೇ ಈಗ ಅವರೆಲ್ಲ ಬರುತ್ತಿದ್ದಾರೆ. ಕನ್ನಡ, ತೆಲುಗು, ತಮಿಳುಗಳಲ್ಲಿ ಬಹು ಬೇಡಿಕೆಯ ನಾಯಕರಾಗಿದ್ದಾರೆ. ಡಾಲಿ ನಟನ, ನಿರ್ಮಾಪಕ, ಕಥೆಗಾರ, ಗೀತೆ ಸಾಹಿತಿಯಾಗಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಸದ್ಯ ಈ ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ