ಚಿತ್ತೂರು : ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶನಿವಾರ ಈ ಘಟನೆ ನಡೆದಿದೆ. ನಂದ್ಯಾಲ ಜಿಲ್ಲೆಯ ನಿವಾಸಿಗಳು ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ.
ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಮೃತರ ಮತ್ತು ಗಾಯಗೊಂಡವರ ಗುರುತು ಇನ್ನು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.