Kornersite

Bengaluru Crime Just In Karnataka State

ಗಂಡು ಮಗು ಹುಟ್ಟಿದ್ದಕ್ಕೆ ಗುಂಡು ಕೊಡಿಸಿದವನ ತಲೆ ಬುರುಡೆ ಓಪನ್ ಮಾಡಿದ ಸ್ನೇಹಿತರು!

ವ್ಯಕ್ತಿಯೊಬ್ಬ ತನಗೆ ಗಂಡು (Boy Baby) ಮಗು ಹುಟ್ಟಿದೆ ಎಂದು ತನ್ನ ಸ್ನೇಹಿತರಿಗೆ ಪಾರ್ಟಿ ಕೊಡಿಸಿದ್ದ. ಆದರೆ, ಆ ಸ್ನೇಹಿತರು ಆತನ ತಲೆ ಬುರುಡೆಯನ್ನೇ ಓಪನ್ ಮಾಡಿರುವ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ರಂಗನಾಥ್ ಎಂಬ ವ್ಯಕ್ತಿಯೇ ಗಂಡು ಮಗು ಆದ ಎಂಬ ಖುಷಿಯಲ್ಲಿ ಸ್ನೇಹಿತರಾದ ಮನೋಜ್, ಮಧುಸೂದ್, ಪ್ರಸಾದ್‍ಗೆ ಪಾರ್ಟಿ ಕೊಡಿಸಿದ್ದ. ಆದರೆ, ಈ ಪಾರ್ಟಿಯಲ್ಲಿಯೇ ಸ್ನೇಹಿತರು ಆತ ಕುಡಿಸಿದ ಮದ್ಯವನ್ನೇ ಕುಡಿದು, ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.
ಈ ಪಾರ್ಟಿಲ್ಲಿ ರಾಜಕೀಯ ಪಕ್ಷದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಕೊಲೆಯಾದ ರಂಗನಾಥ್ ಹಾಗೂ ಸ್ನೇಹಿತರು ರಾಜಕೀಯ ಮಾತನಾಡಿದ್ದಾರೆ.

ರಂಗನಾಥ್ ಕಾಂಗ್ರೆಸ್ (Congress) ಪರ ಮಾತನಾಡುತ್ತಿದ್ದಾಗ ಸ್ನೇಹಿತರು ಬಿಜೆಪಿ (BJP) ಪರ ಮಾತನಾಡಿಕೊಂಡು ಕಿಚಾಯಿಸಿದ್ದಾರೆ. ಆಗ ರಂಗನಾಥ್ ಹಾಗೂ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಜಗಳ ತಾರಕಕ್ಕೇರಿ ಪಕ್ಕದಲ್ಲಿದ್ದ ಬಿಯರ್ ಬಾಟ್ಲಿಯಿಂದ ರಂಗನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ತೀವ್ರ ರಕ್ತಸ್ರಾವ ಹಿನ್ನೆಲೆ ರಂಗನಾಥ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆ ಮಾಡಿಸಿಕೊಂಡ ವ್ಯಕ್ತಿ ಹಾಗೂ ಹಲ್ಲೆ ಮಾಡಿದವರು ಸ್ವಿಗ್ಗಿ ಡೆಲಿವರಿ ಬಾಯ್ (Swiggy Deliver Boy) ಆಗಿ ಕೆಲಸ ಮಾಡಿಕೊಂಡಿದ್ದು, ಅಮೃತಹಳ್ಳಿ ಬಳಿ ಇರುವ ಈಶ್ವರ ದೇವಸ್ಥಾನದ ಬಳಿ ರೂಂ ಮಾಡಿಕೊಂಡಿದ್ದರು. ಹಲ್ಲೆ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ