Kornersite

Bengaluru Just In Karnataka State

Balarama: ಚಿನ್ನದ ಅಂಬಾರಿ ಹೊರುತ್ತಿದ್ದ ಬಲರಾಮ ಇನ್ನಿಲ್ಲ

Mysore : ಅಧಿದೇವತೆ ತಾಯಿ ಚಾಮುಂಡೇಶ್ವರಿ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರಿನ ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ನಡೆಯುತ್ತಿದ್ದ ಬಲರಾಮ (67) ಸಾವನ್ನಪ್ಪಿದ್ದಾನೆ. ಬಲರಾಮನು (Balarama) ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ. ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಹೀಗಾಗಿ ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಆದರೆ, ಇಂದು ಅಸ್ವಸ್ಥಗೊಂಡಿದ್ದ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಲರಾಮ ಸಾವನ್ನಪ್ಪಿದ್ದಾನೆ. ದಸರಾ ಮೆರವಣಿಗೆಯಲ್ಲಿ […]