Kornersite

Bengaluru Just In Karnataka Politics State

Karnataka Assembly Election: ಜೈ ಭಜರಂಗ ಬಲಿ ಘೋಷಣೆ ಮೂಲಕ ಮಾತು ಆರಂಭಿಸಿದ ಪ್ರಧಾನಿ!

Mangalore : ರಾಜ್ಯ ರಾಜಕೀಯ ಕಣ ರಂಗೇರಿದ್ದು, ಭಜರಂಗದಳ ಬ್ಯಾನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಬಿಗ್ ಫೈಟ್ ನಡೆಯುತ್ತಿದೆ. ಇಂದು ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಜರಂಗಬಲಿ ಕೀ ಜೈ (Jai Bajrangbali) ಎಂದು ಹೇಳುವುದರ ಮೂಲಕ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾ ಕೀ ಜೈ ಎಂದು ಹೇಳಿ ಭಾಷಣ ಆರಂಭಿಸಿತ್ತು. ಆದರೆ, ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್‌ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತು […]

Bengaluru Just In Karnataka Politics State

Karnataka Assembly Election: ಬಂಡಾಯ ಎದ್ದು ಸ್ಪರ್ಧಿಸಿದವರಿಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದರೂ ಬಂಡಾಯವೆದ್ದಿರುವ 24 ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಲಾಗಿದೆ. ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್‌ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್‌ ಮುಖಂಡರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ಟಿಕೆಟ್‌ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಅಲ್ಲದೇ, ಹಲವರು ಪಕ್ಷದ ಬಾವುಟ ಉಪಯೋಗಿಸಿ ಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಶಿಸ್ತು ಕ್ರಮ ಕೈಗೊಂಡಿದೆ. ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ. […]

Bengaluru Just In Karnataka Politics State

Karnataka Assembly Election: ಕುಮಾರಣ್ಣನಿಗೆ ಟಗರು ಗಿಫ್ಟ್! ನೀರಾವರಿ ಧ್ಯಾನ!

Raichuru : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್ ಕೂಡ ಪ್ರಯತ್ನಿಸಿದ್ದು, ಪ್ರಚಾರದಿಂದ ಅದು ಕೂಡ ಹಿಂದೆ ಬಿದ್ದಿಲ್ಲ. ಜೆಡಿಎಸ್ ನ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ (JDS Candidates) ಪರ ಭರ್ಜರಿ ಮತಬೇಟೆ ನಡೆಸಿದ್ದಾರೆ. […]

Bengaluru Just In Karnataka Politics State

Karnataka Assembly Election: ಮೋದಿ ಅವರನ್ನು ಎಷ್ಟು ಬೈಯ್ತಿರೋ ಅಷ್ಟು ಬಿಜೆಪಿ ಬೆಳೆಯುತ್ತದೆ; ಶಾ

Chamarajanagar : ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ಕಾಂಗ್ರೆಸ್‍ (Congress) ಎಷ್ಟು ಬೈಯ್ಯುತ್ತದೆಯೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನರ ವಿಶ್ವಾಸವಿಲ್ಲದೆ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮರಳಿ ತರುತ್ತೇವೆ ಎಂದು ಹೇಳುತ್ತಿದೆ. ಲಿಂಗಾಯತ, ಒಕ್ಕಲಿಗ, […]

Just In Karnataka Politics State

Karnataka Assembly Election: ಕಾಂಗ್ರೆಸ್ ವಿರುದ್ಧ ಪ್ರೊಫೈಲ್ ಪಿಕ್ಚರ್ ಅಭಿಯಾನ ಆರಂಭಿಸಿದ ಬಿಜೆಪಿ ನಾಯಕರು!

Bangalore : ಕಾಂಗ್ರೆಸ್ ಪಕ್ಷವು ತನ್ನ ಚಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ (Bajrang Dal) ಬ್ಯಾನ್ ಮಾಡಿರುವ ವಿಷಯ ಪ್ರಸ್ತಾಪಿಸಿದ್ದಕ್ಕೆ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ […]

Bengaluru Just In Karnataka Politics State

Karnataka Assembly Election: ಒಂದೇ ಕುಟುಂಬದ ನಾಲ್ಕು ತಲೆಮಾರಿಗೆ ಅವಕಾಶ; ನಿಮ್ಮವನ್ನು ಇನ್ನಾದರೂ ಬೆಳೆಸಿ!

Ramanagar : ರಾಮನಗರದ ಜನರು ಕಳೆದ 4 ತಲೆ ಮಾರಿನಿಂದಲೂ ಒಂದೇ ಕುಟುಂಬಕ್ಕೆ ಅವಕಾಶ ನೀಡಿದ್ದಾರೆ. ತಂದೆ ಆಯಿತು. ಮಗ ಆಯಿತು. ಸದ್ಯ ಅವರ ಮಗ ಈಗ ಕಣಕ್ಕೆ ಇಳಿದಿದ್ದಾರೆ ಎಂದು ದೇವೇಗೌಡರ (H.D.Deve Gowda) ಕುಟುಂಬ ರಾಜಕಾರಣದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ (BJP) ಬೂತ್ ಮಟ್ಟದ ಕಾರ್ತಕರ್ತರ ಸಭೆಯಲ್ಲಿ ಮಾತನಾಡಿದ ಸುಮಲತಾ ಅವರು, ಅಂಬರೀಶ್ ಅವರ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ರಾಮನಗರದಿಂದ (Ramanagara). ಈ ರಾಮನಗರಕ್ಕೂ ನಮ್ಮ […]

Bengaluru Just In Karnataka Politics State

Karnataka Assembly Election: ಖರ್ಗೆ ಕೋಟೆಯಲ್ಲಿ ರೋಡ್ ಶೋ ನಡೆಸಿ, ಆರ್ಭಟಿಸಲಿರುವ ಮೋದಿ!

Kalaburagi : ರಾಜ್ಯ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಎಲ್ಲ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಭರ್ಜರಿ ಪ್ರಚಾರ ಕೈಗೊಳ್ಳುತ್ತಿವೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ಪಕ್ಷಗಳ ಹೈಕಮಾಂಡ್ ಕೂಡ ಕರ್ನಾಟಕದಲ್ಲಿಯೇ ಬೀಡು ಬಿಟ್ಟಿದ್ದಾರೆ. ಇಂದು ಕಲಬುರಗಿ (Kalaburagi) ಜಿಲ್ಲೆಗೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಮುಂದಾಗಿದೆ.ರೋಡ್ ಶೋ […]

Just In Karnataka Politics State

Karnataka Assembly Election: ಮಾಜಿ ಡಿಸಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಜಾರಕಿಹೊಳಿ!

Chikkodi : ಶಾಸಕ ರಮೇಶ ಜಾರಕಿಹೊಳಿ ಕಾಗವಾಡದ ಅನಂತಪುರದಲ್ಲಿ ಪ್ರಚಾರ ನಡೆಸಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಹರಿಹಾಯ್ದಿದ್ದಾರೆ. ಅಥಣಿ ವಿಧಾನಸಭಾ ಕ್ಷೇತ್ರದ ಜನರು ಒಳಗೊಳಗೆ ಸವದಿ ಸೋಲಿಸಲು ಸಿದ್ಧರಾಗಿದ್ದಾರೆ. ಅಂಬಾದೇವಿಯ ಆಶೀರ್ವಾದದಿಂದ ಅದೊಂದು ಆದರೆ ಸವದಿ ಹೆಣ ಬಿದ್ದಂಗೆ ಲೆಕ್ಕ. ಸವದಿ ದುಡ್ಡು ಕೊಟ್ಟರೆ ತೆಗೆದುಕೊಳ್ಳೊ ದುಡ್ಡು ಅವಂದಲ್ಲ. ಅದು ನಮ್ಮದು. ನಾವು ಸರ್ಕಾರ ತಂದಿದ್ದರಿಂದ ಆತ ಮಂತ್ರಿಯಾದ. ಅವನಲ್ಲಿರೋದು ನಮ್ಮ ದುಡ್ಡು. ಆ ದುಡ್ಡು ತಗೊಂಡು ಬಿಜೆಪಿಗೆ ಮತ ನೀಡಿ ಎಂದು ಹೇಳಿದ್ದಾರೆ. […]

Bengaluru Just In Karnataka Politics State

Karnataka Assembly Election: ನಾನು ಗುಲಾಮಗಿರಿಗೆ ಸೆಡ್ಡು ಹೊಡೆದು ಆಚೆ ಬಂದಿದ್ದೇನೆಂದು ಜನ ಮೆಚ್ಚುತ್ತಿದ್ದಾರೆ- ಶೆಟ್ಟರ್!

Koppal : ನನ್ನ ಸೋಲಿಸಲು ಇದು ಗುಜರಾತ್ ಅಲ್ಲ. ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadeesh Shettar) ತೀರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ (Koppala) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸವದಿ 50 ಸಾವಿರ ಮತಗಳ ಅಂತರದಿಂದ ಸೋಲುತ್ತಾರೆ ಎಂಬ ಅಮಿತ್ ಶಾ (Amitshah) ಹೇಳಿಕೆಗೆ ತೀರುಗೇಟು ನೀಡಿದ ಅವರು, ನಾನು ಹುಬ್ಬಳ್ಳಿ ಜನರ ಹೃದಯದಲ್ಲಿದ್ದೇನೆ. ಹುಬ್ಬಳ್ಳಿ (Hubballi) ಜನ ಏನು ಅಂತ ನನಗೆ ಗೊತ್ತಿದೆ. ನನ್ನ […]

Bengaluru Entertainment Just In Karnataka Politics Sandalwood State

Karnataka Assembly Election: ನಾನು ಜಾತಿಗಾಗಿ ಪ್ರಚಾರಕ್ಕೆ ಬಂದಿಲ್ಲ; ಸುದೀಪ್

ನಾನು ಜಾತಿ(Caste)ಯ ಪರವಾಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ನಟ, ಕಿಚ್ಚ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ವಿಧಾನಸಭಾ ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ನಂತರ ಮಾತನಾಡಿದ ಅವರು, ನಮ್ಮದು ಯಾವ ಜನಾಂಗ. ನಾನು ಎಲ್ಲಿ ಹುಟ್ಟಿದೆ ಎನ್ನುವುದು ಮುಖ್ಯವಲ್ಲ. ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮುಖ್ಯ. ಆಗ ಮಾತ್ರ ನಾವು ಎಲ್ಲ ಮನಸ್ಸುಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ. ನನ್ನ ಬಾಂಧವರ ಪರ ತುಂಬಾ ಪ್ರೀತಿ ಇದೆ’ […]