ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟಕ್ಕೆ ಮಹಿಳೆ ಬಲಿ; ಪರಿಹಾರ ಘೋಷಿಸಿದ ಸಿಎಂ!
Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್ಗಳಿವೆ. ಅದನ್ನ ಸರಿಪಡಿಸುವ […]