Kornersite

Bengaluru Crime Just In Karnataka Politics State

Karnataka Assembly Election: ಮತ ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು! ಮತಗಟ್ಟೆಯ ಆವರಣದಲ್ಲಿಯೇ ನಿಧನ!

Bangalor : ಇಂದು ರಾಜ್ಯಲ್ಲಿನ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ (Vote) ನಡೆಯುತ್ತಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ಈ ಸದರ್ಭದಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಮತದಾನ ಮಾಡಲು ಕೇಂದ್ರಕ್ಕೆ ಬಂದಿದ್ದ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಹಾಸನ (Hassan) ಮತ್ತು ಬೆಳಗಾವಿಯಲ್ಲಿ (Belagavi) ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಜಯಣ್ಣ (49) ಹಕ್ಕು ಚಲಾಯಿಸಿದ ನಂತರ ಕೊಠಡಿಯಿಂದ ಹೊರ […]

Bengaluru Just In Karnataka Politics State

karnataka Assembly Election: ಕಾಂಗ್ರೆಸ್ ಗೆಲುವಿಗಾಗಿ ಚಾಮುಂಡೇಶ್ವರಿ ಮೊರೆ ಹೋದ ಸಿದ್ದು, ಡಿಕೆಶಿ!

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಗ್ಗಟ್ಟಾಗಿ ಕಾಂಗ್ರೆಸ್ ಗೆಲ್ಲಿಸುವ ತಂತ್ರ ಹೆಣೆದ್ದಿದ್ದಾರೆ. ತಮ್ಮ ಸಿಎಂ ಮೇಲಿನ ಕನಸು ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಿದ್ದರು. ಸದ್ಯ ಚಾಮುಂಡೇಶ್ವರಿ ದರ್ಶನಕ್ಕೂ ಕೈ ಕೈ ಹಿಡಿದು ತೆರಳಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ […]

Bengaluru Just In Karnataka Politics State

Karnataka Assembly election: ಮತದಾನ ಮಾಡಿದ 10 ದಿನದ ಬಾಣಂತಿ

Gadag : ರಾಜ್ಯ ಚುನಾವಣೆ (Election) ಹಿನ್ನೆಲೆಯಲ್ಲಿ ಮತದಾನ (Voting) ನಡೆಯುತ್ತಿದ್ದು, ಗದಗದಲ್ಲಿ (Gadag) 10 ದಿನದ ಬಾಣಂತಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ವರ್ಷಾ ಪವಾರ್ ಗದಗ ನಗರದ ಮತಗಟ್ಟೆ ಸಂಖ್ಯೆ 85ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಚಲಾಯಿಸಿದ್ದಾರೆ. ಬಾಣಂತಿಯಾಗಿದ್ದರಿಂದ ಇತರೆ ಮತದಾರರು ಅವರಿಗೆ ಮೊದಲು ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ಬಾಣಂತಿ ಮೊದಲು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸದ್ಯ ಬಾಣಂತಿಯಾಗಿದ್ದರೂ ಹಕ್ಕು ಚಲಾಯಿಸಿದ್ದಕ್ಕೆ, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಕ್ಕು ಚಲಾಯಿಸದಿರುವವರಿಗೆ […]

Bengaluru Just In Karnataka Politics State

Karnataka Assembly Election: 105ರ ವಯಸ್ಸಿನಲ್ಲಿಯೂ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ವೃದ್ಧೆ

Yadagiri : ರಾಜ್ಯದಲ್ಲಿ ವಿಧಾನಸಭಾ ಕಾವು ರೇಂಗೇರಿದ್ದು, ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ತೆರಳಿ ಮತ ಹಾಕುತ್ತಿದ್ದಾರೆ. ಎಲ್ಲೆಡೆಯೂ ಶಾಂತಿಯಿಂದ ಮತದಾನ ನಡೆಯುತ್ತಿದೆ. ಈ ವಯೋವೃದ್ಧರಿಗೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ವೃದ್ಧೆಯೊಬ್ಬರು ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ. ಸುರಪುರ (Surapur) ತಾಲೂಕಿನ ನಗನೂರಿನಲ್ಲಿ 105 ವರ್ಷದ ಅಜ್ಜಿಯೊಬ್ಬರು ತಮ್ಮ ಹಕ್ಕು ಚಲಾಯಿಸಿದ್ದಾರೆ. ದೇವಕ್ಕಮ್ಮ ಸಿದ್ದರಾಮರಡ್ಡಿ (105) ಎಂಬ ಅಜ್ಜಿ, ಮೊಮ್ಮಗನೊಂದಿಗೆ ಕಾರಿನಲ್ಲಿ ತೆರಳಿ ತಮ್ಮ ಹಕ್ಕು (Vote) ಮಾಡಿದ್ದಾರೆ. […]

Bengaluru Just In Karnataka Politics State

Karnataka Assembly Election: 4 ತಿಂಗಳ ಹಸುಗೂಸಿನೊಂದಿಗೆ ಬಂದು, ಹಕ್ಕು ಚಲಾಯಿಸಿದ ಮಹಿಳೆ!

Madikeri : ರಾಜ್ಯದಲ್ಲಿ ವಿಧಾನಸಬೆ ಮತದಾನ (Karnataka Assembly Election) ರಂಗೇರಿದೆ. ಮತದಾರರು ಉತ್ಸುಕತೆಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಹಿಳೆಯೊಬ್ಬರು 4 ತಿಂಗಳ ಮಗುವಿನೊಂದಿಗೆ ಆಗಮಿಸಿ, ಮತದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಕಾವೇರಿ ಹಾಲ್ ಹತ್ತಿರದ ನಿವಾಸಿ ಆಶಿಕಾ ಎಂಬುವವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಆದರೆ, ಚುನಾವಣೆ ಘೋಷಣೆಯಾಗಿದ್ದರಿಂದಾಗಿ ತಮ್ಮ ಹಕ್ಕು ಕಳೆದುಕೊಳ್ಳಬಾರದು ಎಂಬ ಕಾರಣಕ್ಕೆ 4 ತಿಂಗಳ ಹಸುಗೂಸನ್ನೇ ಹೊತ್ತುಕೊಂಡು ಮತಗಟ್ಟೆಗೆ ಆಗಮಿಸಿದ್ದಾರೆ. ಮಡಿಕೇರಿಯ (Madikeri) ಸಂತಜೋಸೆಫರ್ ಶಾಲೆಗೆ […]

Just In Karnataka Politics State

Karnataka Assembly Election: ಹಕ್ಕು ಚಲಾಯಿಸಿ, ನಮ್ಮನ್ನು ನೋಡಿ ಕಲಿಯಿರಿ ಎಂದು ಯುವ ಪೀಳಿಗೆಗೆ ಕಿವಿ ಮಾತು!

Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ […]

Bengaluru Just In Karnataka Politics State

karnataka Assembly Election: ರಾಜ್ಯದಲ್ಲಿ ಇಂದು ಮತದಾನದ ಹಬ್ಬ; ಎಲ್ಲರೂ ಹಬ್ಬದಲ್ಲಿ ಭಾಗವಹಿಸಿ, ಅಭಿವೃದ್ಧಿಗೆ ಕೈ ಜೋಡಿಸಿ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election) ಇಂದು ಮತದಾನ ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ (Vote) ಮಾಡಲು ಅವಕಾಶ ನೀಡಲಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆನ್ನು ಈ ಬಾರಿ ಕೈಗೊಳ್ಳಲಾಗಿದೆ.ಎಲ್ಲ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ (PM Modi) ಸೇರಿದಂತೆ ಘಟನಾಘಟಿ ನಾಯಕರುಗಳು, ಸೆಲೆಬ್ರಿಟಿಗಳು […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ಬರೋಬ್ಬರಿ 375 ಕೋಟಿ ರೂ. ವಶಕ್ಕೆ!

NewDelhi : ರಾಜ್ಯದಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಈ ಬಾರಿ ಹಣದ ಹೊಳೆ ಹರಿಸಲು ಅಭ್ಯರ್ಥಿಗಳು ಮುಂದಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳು ಕೂಡ ದಿಟ್ಟತನದಿಂದ ದಾಳಿ ನಡೆಸಿ, ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ […]

Bengaluru Just In Karnataka Politics State

Bhajarangi: ಡಿ.ಕೆ. ಶಿವಕುಮಾರ್ ಗೆ ಪ್ರಸಾದ ಕರುಣಿಸಿದ ಭಜರಂಗಿ!

ರಾಜ್ಯದಲ್ಲಿ ಭಜರಂಗಿ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ದೊಡ್ಡ ಫೈಟ್ ನಡೆಯಿತು. ಕಾಂಗ್ರೆಸ್ ಪ್ರಣಾಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಲಾಭ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಇದೇ ವಿಷಯ ಮುಂದಿಟ್ಟುಕೊಂಡು ಕಾಂಗ್ರೆಸ್ ಗೆ ಚುನಾವಣೆಯಲ್ಲಿ ಮುಖಭಂಗ ಉಂಟು ಮಾಡಲು ಯತ್ನಿಸಿದರು. ಆದರೆ, ಇಂದು ಡಿ.ಕೆ. ಶಿವಕುಮಾರ್ ಗೆ ಭಜರಂಗಿಯೇ ಪ್ರಸಾದ ಕರುಣಿಸಿದ್ದಾನೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮೈಸೂರು ಸರ್ಕಲ್ ನಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಭಜರಂಗಿಯ ದರ್ಶನ ಮಾಡಿ […]

Bengaluru Crime Just In Karnataka Politics State

karnataka Assembly Election: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ ಆರೋಪ!

Bangalore : ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್‌ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಅವರ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ಲಿತೇಶ್‌, ನಂದನ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, […]