Crime News: ಚುನಾವಣೆ ಸಂದರ್ಭದಲ್ಲಿಯೇ ಗುಂಡಿನ ಮೊರೆತ! ಕಾರ್ಪೊರೇಟರ್ ಪತಿಯ ಮೇಲೆ ದಾಳಿ!
ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.19ರ ಪಕ್ಷೇತರ ಸದಸ್ಯೆ ನಿಶಾತ್ ಅವರ ಪತಿ ಹೈದರ್ ಅಲಿ ನದಾಫ್ ಮೇಲೆಯೇ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಹತ್ಯೆಗೈದಿದ್ದಾರೆ. ಹೈದರ್ ನದಾಫ್ ಮೇಲೆ ಗುಂಡಿನ ದಾಳಿ ನಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ. ನಗರದಲ್ಲಿನ ಚಾಂದಪೂರ ಕಾಲೋನಿಯಲ್ಲಿನ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. […]