Karnataka Assembly Election: ಕಂಪ್ಲಿಯಿಂದ ನಾಮಪತ್ರ ಸಲ್ಲಿಸಿದ ಮಂಗಳಮುಖಿ!
Bellary : ರಾಜ್ಯ ವಿಧಾನಸಭಾ ಚುನಾವಣೆ Karnataka Assembly Election)ಗೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಿಂದ ಮಂಗಳಮುಖಿಯೊಬ್ಬರು ದೇಶಪ್ರೇಮ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳಮುಖಿಯಾಗಿರುವ ಟಿ.ರಾಮಕ್ಕ(T Ramakka) ನಾಮಪತ್ರ ಸಲ್ಲಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದಾರೆ. ಕಂಪ್ಲಿ ತಾಲೂಕಿನ ಬಾದನಹಟ್ಟಿ ಗ್ರಾಮದವವರಾದ ಟಿ ರಾಮಕ್ಕ ವಿದ್ಯಾಭ್ಯಾಸ ಮಾಡದಿದ್ದರೂ ಶಾಸಕರಾಗುವ (MLA) ಆಗುವ ಕನಸು ಕಟ್ಟಿಕೊಂಡು ವಿಧಾನಸಭೆ ಚುನಾವಣೆಗೆ ಇದೀಗ ಸ್ಪರ್ಧೆ ಮಾಡಿದ್ದಾರೆ. ದೇಶಪ್ರೇಮ ಪಕ್ಷದ ಪದಾಧಿಕಾರಿಗಳು ಹಾಗೂ ಮಂಗಳಮುಖಿಯರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆಗೆ […]