Kornersite

Just In Karnataka Politics State

Karnataka Assembly Election: ಹಕ್ಕು ಚಲಾಯಿಸಿ, ನಮ್ಮನ್ನು ನೋಡಿ ಕಲಿಯಿರಿ ಎಂದು ಯುವ ಪೀಳಿಗೆಗೆ ಕಿವಿ ಮಾತು!

Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ […]

Bengaluru Just In Karnataka Politics State

karnataka Assembly Election: ರಾಜ್ಯದಲ್ಲಿ ಇಂದು ಮತದಾನದ ಹಬ್ಬ; ಎಲ್ಲರೂ ಹಬ್ಬದಲ್ಲಿ ಭಾಗವಹಿಸಿ, ಅಭಿವೃದ್ಧಿಗೆ ಕೈ ಜೋಡಿಸಿ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election) ಇಂದು ಮತದಾನ ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ (Vote) ಮಾಡಲು ಅವಕಾಶ ನೀಡಲಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆನ್ನು ಈ ಬಾರಿ ಕೈಗೊಳ್ಳಲಾಗಿದೆ.ಎಲ್ಲ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ (PM Modi) ಸೇರಿದಂತೆ ಘಟನಾಘಟಿ ನಾಯಕರುಗಳು, ಸೆಲೆಬ್ರಿಟಿಗಳು […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ಬರೋಬ್ಬರಿ 375 ಕೋಟಿ ರೂ. ವಶಕ್ಕೆ!

NewDelhi : ರಾಜ್ಯದಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಈ ಬಾರಿ ಹಣದ ಹೊಳೆ ಹರಿಸಲು ಅಭ್ಯರ್ಥಿಗಳು ಮುಂದಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳು ಕೂಡ ದಿಟ್ಟತನದಿಂದ ದಾಳಿ ನಡೆಸಿ, ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ […]

Bengaluru Just In Karnataka Politics State

Bhajarangi: ಡಿ.ಕೆ. ಶಿವಕುಮಾರ್ ಗೆ ಪ್ರಸಾದ ಕರುಣಿಸಿದ ಭಜರಂಗಿ!

ರಾಜ್ಯದಲ್ಲಿ ಭಜರಂಗಿ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ದೊಡ್ಡ ಫೈಟ್ ನಡೆಯಿತು. ಕಾಂಗ್ರೆಸ್ ಪ್ರಣಾಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಲಾಭ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಇದೇ ವಿಷಯ ಮುಂದಿಟ್ಟುಕೊಂಡು ಕಾಂಗ್ರೆಸ್ ಗೆ ಚುನಾವಣೆಯಲ್ಲಿ ಮುಖಭಂಗ ಉಂಟು ಮಾಡಲು ಯತ್ನಿಸಿದರು. ಆದರೆ, ಇಂದು ಡಿ.ಕೆ. ಶಿವಕುಮಾರ್ ಗೆ ಭಜರಂಗಿಯೇ ಪ್ರಸಾದ ಕರುಣಿಸಿದ್ದಾನೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮೈಸೂರು ಸರ್ಕಲ್ ನಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಭಜರಂಗಿಯ ದರ್ಶನ ಮಾಡಿ […]

Bengaluru Crime Just In Karnataka Politics State

karnataka Assembly Election: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ ಆರೋಪ!

Bangalore : ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್‌ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಅವರ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ಲಿತೇಶ್‌, ನಂದನ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, […]

Bengaluru Just In Karnataka Politics State

Aravinda Bellada: ಅಭಿಮಾನಿ ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಲೆ ಮೇಲೆ ಇಟ್ಟುಕೊಂಡ ಶಾಸಕ!

Dharwad : ಅಭಿಮಾನಿಯೊಬ್ಬರು ನೀಡಿದ್ದ ಪಾದರಕ್ಷೆಯನ್ನು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಅವರು ಕಣ್ಣಿಗೆ ಒತ್ತಿಕೊಂಡು ತಮ್ಮ ತಲೆಯ ಮೇಲೆ ಇಟ್ಟುಕೊಂಡಿದ್ದಾರೆ. ಬೆಲ್ಲದ್ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ಕಣ್ಣಿಗೆ ಒತ್ತಿಕೊಂಡು ತಲೆ ಮೇಲೆ ಇಟ್ಟುಕೊಂಡಿದ್ದಾರೆ. ಬೆಲ್ಲದ್ ಅವರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಲಯಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅವರನ್ನು ಹೊಗಳಿದರೆ ಇನ್ನು ಕೆಲವರು ಇದೊಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಉಡುಗೊರೆಯನ್ನು […]

Just In Politics State

ಮತದಾರರಿಗೆ ಉಚಿತ ಆಹಾರ ವಿತರಣೆ ಹೇಳಿಕೆಗೆ ಗರಂ

ಇತ್ತೀಚೆಗಷ್ಟೇ ಮತದಾರರು ಮತ ಚಲಾಯಿಸಿದರೆ, ತಿಂಡಿ ಉಚಿತ ಹಾಗೂ ಮೊದಲ ಬಾರಿಗೆ ಮತ ಹಾಕುತ್ತಿರುವವರು ತಮ್ಮ ಹಕ್ಕು ಚಲಾಯಿಸಿದರೆ ಉಚಿತ ಸಿನಿಮಾ ಟಿಕೆಟ್ ನೀಡಲಾಗುವುದು ಎಂದು ವಿಧ ವಿಧದ ಆಫರ್ ಗಳನ್ನು ಹೋಟೆಲ್ ಮಾಲೀಕರು ನೀಡಿದ್ದರು. ಸದ್ಯ ಈ ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ. ಉಚಿತ ಆಹಾರ ನೀಡುತ್ತೇನೆ ಎಂದು ಘೋಷಿಸಿರುವ ಹೋಟೆಲ್‌ಗಳ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ಇದು ಪ್ರಚೋದನೆಗಳು ಮತ್ತು ಚುನಾವಣೆ ನೀತಿ ಉಲ್ಲಂಘನೆ ಯಾಗುತ್ತದೆ ಎಂದು […]

Bengaluru Just In Karnataka Politics State

“ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್” -ಬಿಜೆಪಿ ಅಭಿಯಾನ!

ರಾಜ್ಯದಲ್ಲಿ ಮತದಾನಕ್ಕೆ ಇನ್ನೂ ಎರಡು ಎರಡು ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಕಾಂಗ್ರೆಸ್ ಹಣಿದು, ಮತದಾರರನ್ನು ಸೆಳೆಯುವುದಕ್ಕಾಗಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ರೂಪಿಸಿದೆ. ಮಂಡ್ಯದ ನೆಲದಲ್ಲಿ ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್ ಎಂಬ ಹೊಸ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಕಾಂಗ್ರೆಸ್ ತನ್ನ ಮ್ಯಾನೋಫಸ್ಟ್ ನಲ್ಲಿ ಭಜರಂಗದಳ ನಿಷೇಧದ ಕುರಿತು ಪ್ರಸ್ಥಾಪಿಸಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು, ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅವರಿಂದ ಹನುಮನ ಮುಸುಕು ದಾರಣೆ ಮಾಡಿ ಅಭಿಯಾನ ಆರಂಭಿಸಿದ್ದಾರೆ. ಮಂಡ್ಯದ ಸಂಜಯ್ […]

Bengaluru Just In Karnataka Politics State

ಇಂದು ಸಂಜೆ 5 ಗಂಟೆಯಿಂದ ಬಾರ್ ಗೆ ಬೀಗ: 3 ದಿನ ಸಿಗೋದಿಲ್ಲ ಎಣ್ಣೆ

ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗುವುದು. ಹೀಗಾಗಿ ಎಲ್ಲೆಡೆ ಮದ್ಯ ಮಾರಾಟಕ್ಕೆ ಭಾರೀ ಬೇಡಿಕೆ ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ. ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ […]

Bengaluru Just In Karnataka Politics State

Karnataka Assembly Election: ಸಂಜೆ 5ರ ನಂತರ ಬಹಿರಂಗ ಪ್ರಚಾರಕ್ಕೆ ತೆರೆ; ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶ

Bangalore : ಮೇ 10ರಂದು ಮತದಾನ ಇರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಸಭೆ, ಸಮಾರಂಭ, ಉತ್ಸವ, ರ್ಯಾಲಿಗಳಿಗೆ ಇಂದು ಸಂಜೆಯಿಂದಲೇ ತೆರೆ ಬೀಳಲಿದೆ. ಸಂಜೆ 5ರ ನಂತರ ಧ್ವನಿ ವರ್ಧಕಗಳ ಬಳಕೆ ಮಾಡುವಂತಿಲ್ಲ. ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅಭ್ಯರ್ಥಿ ಸೇರಿ 6 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಹೊರತುಪಡಿಸಿ, ಹೊರಗಿನಿಂದ ಬಂದ ಸ್ಟಾರ್ ಪ್ರಚಾರಕರು ಮತ್ತು ಘಟಾನುಘಟಿ ನಾಯಕರು ತಮ್ಮ […]