Kornersite

Bengaluru Crime Just In Karnataka Politics State

Karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಭಾರೀ ಪ್ರಮಾಣದ ಕುಕ್ಕರ್ ವಶಕ್ಕೆ!

Belagavi : ಮತದಾರರಿಗೆ ಹಂಚಲು ಭಾರೀ ಪ್ರಮಾಣದಲ್ಲಿ ತಂದಿದ್ದ ಕುಕ್ಕರ್(Cooker) ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರ ಗ್ರಾಮದಲ್ಲಿ 25 ಲಕ್ಷ ರೂ. ಮೌಲ್ಯದ 1800 ಕುಕ್ಕರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಈ ಒಂದು ಕುಕ್ಕರ್ ನ ಬೆಲೆ 1400 ರೂ. ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 25 ಲಕ್ಷ ಮೌಲ್ಯದ ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕುಕ್ಕರ್ ಡಬ್ಬಿ ಮೇಲೆ […]

Bengaluru Crime Just In Karnataka Politics State

Karnataka Assembly Election: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ; ಸಾ.ರಾ. ಮಹೇಶ್ ಪುತ್ರನ ಕಾರಿಗೆ ಕಲ್ಲು!

ರಾಜ್ಯ ವಿಧಾನಸಭೆ ಚುನಾವಣೆ (Assembly Election 2023) ಗೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ಜಟಾಪಟಿ ಹೆಚ್ಚಾಗುತ್ತಿದೆ. ಹಲವರು ಸೇಡಿನ ರಾಜಕಾರಣ ಮಾಡುತ್ತಿರುವುದು ರಾಜ್ಯದಲ್ಲಿ ಈ ಬಾರಿ ಬೆಳಕಿಗೆ ಬರುತ್ತಿದೆ. ಹೀಗಾಗಿಯೇ ಹಲವೆಡೆ ನಾಯಕರ ಹಾಗೂ ಪ್ರಚಾರದ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿರುವ ಮೈಸೂರಿನ ಕೆ.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಕಾರ್ಯಕರ್ತರ ನಡುವೆ ಜಗಳ ನಡೆದಿದ್ದು, ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪುತ್ರ ಸಾ.ರಾ. ಧನುಷ್ […]

Bengaluru Just In Karnataka Politics State

Narendra Modi: ನಂಜನಗೂಡು ಶ್ರೀಕಂಠೇಶ್ವರ ದರ್ಶನ ಮಾಡಿದ ಪ್ರಧಾನಿ!

Mysore : ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ ಹಾಗೂ ಮತ ಬೇಟೆ ಅಂತ್ಯಗೊಳಿಸಿದರು. ಅವರ ಕೊನೆಯ ಸಮಾವೇಶ ನಂಜನಗೂಡಿನಲ್ಲಿ ನಡೆಯಿತು. ಈ ಕಾರ್ಯಕ್ರಮ ಮುಗಿಸಿದ ಕೂಡಲೇ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿಯನ್ನು ಮಂಗಳವಾದ್ಯಗಳೊಂದಿಗೆ ಭವ್ಯವಾಗಿ ಸ್ವಾಗತಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ […]

Bengaluru Just In Karnataka Politics State

PM Modi: ಬರೋಬ್ಬರಿ 6 ರೋಡ್ ಶೋ, 18 ಸಮಾವೇಶದ ಮೂಲಕ ಮತ್ತೊಮ್ಮೆ ಅಧಿಕಾರದ ಕಹಳೆ ಊದಿದ ಮೋದಿ!

Bangaolre : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲ ಪಕ್ಷಗಳ ರಾಷ್ಟ್ರೀಯ ನಾಯಕರು ಪ್ರಚಾರ ಕಾರ್ಯ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾಲಿನಲ್ಲಿ ಪ್ರಥಮರಾಗಿ ನಿಂತಿದ್ದಾರೆ. ಮೋದಿ ಅವರು ರಾಜ್ಯದಲ್ಲಿ ಕಳೆದ 9 ದಿನಗಳಲ್ಲಿ 18 ಬೃಹತ್‌ ಸಮಾವೇಶ ಹಾಗೂ 6 ರೋಡ್‌ ಶೋಗಳ ಮೂಲಕ ಚುನಾವಣಾ ಪ್ರಚಾರ ನಡೆಸಿದ್ದಾರೆ. ಮೋದಿ (Prime minister Narendra Modi tour in Karnataka) ಅವರೊಂದಿಗೆ, ಕೇಂದ್ರ ಸಚಿವ ಅಮಿತ್ ಶಾ (Amit Shah), ಸ್ಮೃತಿ ಇರಾನಿ […]

Bengaluru Crime Just In Karnataka Politics State

Karnataka Assembly election: ಬೆಂಗಳೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಫೈಟ್!

Bangalore: ಸಿಲಿಕಾನ್ ಸಿಟಿಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆದ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ (clash) ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಧಾನಸಭಾ ಕ್ಷೇತ್ರದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಅಟ್ಟೂರು ಬಡಾವಣೆಯಲ್ಲಿ ಬೈಕ್ […]

Bengaluru Just In Karnataka Politics State

Karnataka Assembly Election: ಎರಡು ದಿನ ಸುದ್ದಿ ಪ್ರಸಾರಕ್ಕೆ ತಡೆ!

Bangalore : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ತೀವ್ರ ಕುತೂಹಲ ಕೆರಳಿಸಿದೆ. ನಾವಣೆಗೆ ಇನ್ನೂ ಕೇವಲ 3 ದಿನಗಳು ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹೀಗಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು […]

Just In Kornotorial

ಬಂಡೆಯ ಮೇಲೆ ಟಗರು ನಿಲ್ಲುವುದೋ? ಟಗರಿನ ಮೇಲೆ ಬಂಡೆ ಬೀಳುವುದೋ? ಸದ್ಯಕ್ಕಂತೂ ಮತದಾರರ ಮುಂದೆ ಒಂದೇ ಎನ್ನುತ್ತಿದ್ದಾರೆ!

ಸದ್ಯ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲ ಪಕ್ಷಗಳು ಶಕ್ತಿ ಮೀರಿ ಜನರ ಮನಸ್ಸು ಸೆಳೆಯಲು ಪ್ರಯತ್ನಿಸುತ್ತಿವೆ. ಅತಿರತ ಮಹಾರಾತ ಎನಿಸಿಕೊಂಡಿದ್ದ ನಾಯಕರುಗಳು ರಾಜ್ಯದಲ್ಲಿಯೇ ಬೀಡು ಬಿಟ್ಟಿರುವುದು ಕೂಡ ಈ ಬಾರಿ ಎಲ್ಲ ಪಕ್ಷಗಳ ಆತ್ಮವಿಶ್ವಾಸ ಕುಗ್ಗಿಸಿದೆ ಎಂಬುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಮೂರು ಪಕ್ಷಗಳ ಮಧ್ಯೆ ಬಿಗ್ ಫೈಟ್ ಇದೆಯಾದರೂ ಬಹುಮತ ಪಡೆದು ಅಧಿಕಾರ ಗಳಿಸಲು ಮಾತ್ರ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ. ಜೆಡಿಎಸ್ ಸಮ್ಮಿಶ್ರಕ್ಕಾಗಿ ಮಾತ್ರ ಹೋರಾಟ. ಒಂದು ವೇಳೆ ಬಿಜೆಪಿ […]

Bengaluru Just In Karnataka Politics State

Narendra Modi: ಕರ್ನಾಟಕ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿಗೆ ಋಣಿಯಾಗಿರುತ್ತೇನೆ; ಮೋದಿ!

shivamogga : ಕರ್ನಾಟಕದ ಸಂಪೂರ್ಣ ಅಭಿವೃದ್ಧಿ ಮಾಡಿ, ನಿಮ್ಮ ಪ್ರೀತಿಯ ಬಡ್ಡಿ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಆಯನೂರಿನಲ್ಲಿ ನಡೆದ ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ (BS Yediyurappa) ಅವರ ನೆಲದಿಂದ ರಾಜ್ಯದ ಜನರಿಗೆ ಗ್ಯಾರಂಟಿ ನೀಡುತ್ತೇನೆ. ರಾಜ್ಯದಲ್ಲಿ ಒಂದು ಬಲೂನ್‍ಗೆ ಹವಾ ತುಂಬಿದೆ. ಸುಳ್ಳು ಗಾಳಿ ತುಂಬಿ ಬಲೂನ್ ಹಾರಿಸಲು ಹಲವರು ಯತ್ನಿಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮತದಾರರೇ ಆ ಬಲೂನ್ ನುಚ್ಚುನೂರು ಮಾಡಿದ್ದಾರೆ. ಹೆದರಿದ […]

Bengaluru Just In Karnataka Politics State

Karnataka Assembly Election: ರಾಜ್ಯ ರಾಜಧಾನಿಯಲ್ಲಿ 2ನೇ ದಿನವೂ ಪ್ರಧಾನಿ ಹವಾ!

Bangalore : ಪ್ರಧಾನಿ ನರೇಂದ್ರ ಮೋದಿ ಅವರ ಹವಾ ರಾಜ್ಯ ರಾಜಧಾನಿಯಲ್ಲಿ (Bengaluru) 2ನೇ ದಿನವೂ ಮುಂದುವರೆದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 8 ಕಿ.ಮೀವರೆಗೆ ಸಾಗಲಿದೆ. ನಗರದ ನ್ಯೂ ತಿಪ್ಪಸಂದ್ರದಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ಆರಂಭವಾಗಿದ್ದು, ಈ ರೋಡ್ ಶೋ, ಮಹಾದೇವಪುರ, ಕೆ.ಆರ್. ಪುರಂ, ಸಿ.ವಿ. ರಾಮನ್ ನಗರ, ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ ಕ್ಷೇತ್ರಗಳಲ್ಲಿ […]

Bengaluru Just In Karnataka Politics State

Karnataka Assembly Election: ನೀವು ಬಿಟ್ಟರೂ 40 ಪರ್ಸೆಂಟ್ ಕರ್ಮ ನಿಮ್ಮನ್ನು ಬಿಡುವುದಿಲ್ಲ ಎಂದು ಕಾಲೆಳೆದ ಸಿದ್ದರಾಮಯ್ಯ!

Bangalore : ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಂಗಳೂರಿನ (Bengaluru) 11 ವಿಧಾನಸಭಾ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ(Road Show) ನಡೆಸಿದ್ದಾರೆ. ರೋಡ್ ಶೋ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ಬಿಜೆಪಿ ವೈರಲ್ ಮಾಡಿದೆ. ಆದರೆ, ಈ ಫೋಟೋವೊಂದರಲ್ಲ ಮಳಿಗೆಯ ಮೇಲೆ 40% ಆಫರ್‌ ಇರುವ ಪೋಸ್ಟರ್‌ ಕಂಡು ಬಂದಿದೆ. ಹೀಗಿಗ ಈ ಫೋಟೋವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ (Siddaramaiah) ಅವರು ʻನೀವು ಬಿಟ್ಟರೂ 40% ಕರ್ಮ ನಿಮ್ಮನ್ನು ಬಿಡದೆ ಹಿಂಬಾಲಿಸುತ್ತಿದೆ ಮೋದಿಜೀ […]