ಚಿನ್ನಾಭರಣದ ಮಳಿಗೆಗೆ ನುಗ್ಗಿದ ನೀರು; ನೀರಲ್ಲಿ ಲೀನವಾದ ಚಿನ್ನಾಭರಣ!
ಬೆಂಗಳೂರಿನಲ್ಲಿ ನಿನ್ನೆ ಭರ್ಜರಿ ಮಳೆ ಸುರಿದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿ ಸಂಭವಿಸುವಂತಾಗಿದೆ. ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದ್ದು, ಮಳೆಯ ನೀರು ಅಂಗಡಿಗೆ ನುಗ್ಗಿ ಸುಮಾರು ಎರಡುವರೆ ಕೋಟಿ ರೂ. ನಷ್ಟವಾಗಿದೆ. ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ […]