Kornersite

Just In National

Train Accident: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು!

ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಹತ್ತಿರ ಗೂಡ್ಸ್ ರೈಲಿನಡಿ ಸಿಲುಕಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ […]

Just In National Politics

ಒಡಿಶಾ ರೈಲು ದುರಂತ ಹಿನ್ನೆಲೆ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ರದ್ದು

ಶುಕ್ರವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರದ 9ನೇ ವರ್ಷಾಚರಣೆ ರದ್ದಾಗಿದೆ. ಈ ಕಾರ್ಯಕ್ರಮ ರದ್ದಾಗಲು ಕಾರಣ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ ನಡ್ದಾ ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಒಡಿಶಾದ ಬಾಲ್ ಸೋರ್ ನಲ್ಲಿ ನಡೆದ ರೈಲು ದುರಂತದ ಬಳಿಕ ಪ್ರತಿಕ್ರಿಯಿಸಿರುವ ವಿಪಕ್ಷಗಳು ಈ ಘಟನೆಯ ಕುರಿತಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ದುರ್ಘಟನೆಯ ಹೊಣೆ ಹೊತ್ತು ರೈಲ್ವೈ ಸಚಿವರು ರಾಜೀನಾಮೆ ನೀಡಬೇಕು […]

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]

Bengaluru Crime Just In Karnataka Politics State

ಒಡಿಶಾ ರೈಲು ಅಪಘಾತ: “ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ”-ಸಿದ್ದು

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಘಟನೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 650ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚುತ್ತಲೇ ಇದೆ. ಬೆಂಗಳೂರು-ಹೌರಾ ಎಕ್ಸಪ್ರೆಸ್ ಮತ್ತು ಶಾಲಿಮಾರ್-ಚೆನೈ ಕೋರಮಂಡಲ್ ಎಕ್ಸ್ ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾ ಬಾಲಸೋರ್ ನಲ್ಲಿ ನಡೆದ ರೈಲು ಪಘಾತ ದೇಶವನ್ನೇ ಬೆಚ್ಚಿ […]

Crime Just In State

ಒಡಿಶಾ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ನರೇಂದ್ರ ಮೋದಿ ಸಭೆ

ಒಡಿಶಾ ರೈಲು ಅಪಘಾತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬೇರೆ ಕಾರ್ಯಕ್ರಮಗಳನ್ನ ರದ್ದು ಪಡಿಸಿ, ಒಧಿಶಾ ರೈಲು ದುರಂತದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಅಪಘಾತದವಾದ ಸ್ಥಳದಿಂದ ಹೋಗಬೇಕಿದ್ದ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ದುರಂತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವುದು ತಿಳಿದು ಬಂದಿದೆ. 5 ಎನ್ ಡಿ ಆರ್ ಎಫ್, 200 ಪೊಲೀಸ್ ಸಿಬ್ಬಂಧಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ […]

Crime Just In Karnataka National State

ರೈಲುಗಳ ಮಧ್ಯೆ ಭೀಕರ ಅಪಘಾತ; ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ!

ಭುವನೇಶ್ವರ : ಒಡಿಶಾದಲ್ಲಿ (Odisha Train Tragedy) ನಿನ್ನೆ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೆ ಈ ದುರಂತಕ್ಕೆ 250ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತ್ತು. ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ […]