Karnataka Assembly Election: ಬಿಜೆಪಿಗೆ ನೆಲೆ ಇಲ್ಲದ ಕ್ಷೇತ್ರದಲ್ಲಿ ಇಂದು ಪ್ರಧಾನಿಯಿಂದ ಪ್ರಚಾರ!
Mysore : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ಭಾನುವಾರ ಹಳೇ ಮೈಸೂರು (Old Mysuru) ಭಾಗದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಮಿತ್ ಶಾ (Amitshah) ಅವರು ಮೈಸೂರಿಗೆ ಬಂದು ಹೋದ ನಂತರ ಪ್ರಧಾನಿ ಮೋದಿ ಅವರು ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ಸಾಂಸ್ಕೃತಿಕ ನಗರಿಯಲ್ಲಿ ರೋಡ್ ಶೋ ನಡೆಯಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತ ಯಾಚನೆ ನಡೆಸಲಿದ್ದಾರೆ. […]