ಅಯೋಧ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ರಾಮನ ಮೂರ್ತಿ ಕೆತ್ತನೆಯಲ್ಲಿ ಕನ್ನಡಿಗರು!
ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯ ಅತ್ಯಂತ ವೇಗವಾಗಿ ಸಾಗುತ್ತಿದ್ದು, ಡಿಸೆಂಬರ್ ಒಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಮಾಡಿ ಬಾಲರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜಸ್ಥಾನದ ಒಬ್ಬ ಶಿಲ್ಪಿ, ಕರ್ನಾಟಕದ ಇಬ್ಬರು ಶಿಲ್ಪಿಗಳು ಸೇರಿದಂತೆ ಏಕಕಾಲಕ್ಕೆ ಮೂವರು ಶಿಲ್ಪಿಗಳು ಪ್ರತ್ಯೇಕವಾಗಿ ಬಾಲರಾಮನ ವಿಗ್ರಹ ಕೆತ್ತನೆ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ, ವಿಎಚ್ಪಿ ಕೇಂದ್ರೀಯ ಸಹಕಾರ್ಯದರ್ಶಿ ಗೋಪಾಲ್ ತಿಳಿಸಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ ವಿದ್ಯಾ ಕೇಂದ್ರ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ […]