Kornersite

Bengaluru Just In Karnataka Politics State

Cabinet: ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

NewDelhi: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Cabinet Expansion) ಕಸರತ್ತು ಮುಗಿದಿದ್ದು, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೈಕಮಾಂಡ್ ನಾಯಕರ ಜೊತೆಗೆ ಸರಣಿ ಸಭೆ ನಡೆಸಿ ಅಂತಿಮವಾಗಿ ಪಟ್ಟಿ ಸಿದ್ಧಪಡಿಸಿದ್ದಾರೆ. ಹೊಸ ಸರ್ಕಾರಕ್ಕೆ ಶುಭಾಶಯ ಕೋರಿದ ಸೋನಿಯಾಗಾಂಧಿ ಉತ್ತಮ ಆಡಳಿತ ನೀಡುವಂತೆ ಸೂಚಿಸಿದ್ದಾರೆ. ಳಿಕ 23 ಹೆಸರುಗಳನ್ನು ಅಂತಿಮಗೊಳಿಸಿದ್ದು ನಾಳೆ ಬೆಳಗ್ಗೆ 11:45 ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 23 ಜನರಿಗೆ ಈಗಾಗಲೇ ದೂರವಾಣಿ ಕರೆ ಮೂಲಕ […]

Bengaluru Just In Karnataka Politics State

Cabinet: ಕೊನೆಗೂ ಸಚಿವರ ಪಟ್ಟಿ ಅಂತಿಮ; ಇವರೇ ನೋಡಿ ನಮ್ಮ ಸಚಿವರು!

Bangalore : ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟ ರಚನೆಗೆ ಕೂಡ ಕಾಂಗ್ರೆಸ್ ನಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಒಮ್ಮತದ ಬಾರದ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಹೈಕಮಾಂಡ್ಗೆ ತಲೆನೋವಾಗಿತ್ತು. ಸದ್ಯ ಅಳೆದು ತೂಗಿ ಸಚಿವರ ಪಟ್ಟಿ ಸಿದ್ಧವಾಗಿದ್ದು, (Cabinet Ministers) ಮೇ 28ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಚಿವರ ಪಟ್ಟಿ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ಕೆಲವು […]

Bengaluru Just In Karnataka Politics State

ಸಿದ್ದು ಸಂಪುಟದಲ್ಲಿ ಯಾರಿಗೆಲ್ಲ ಸಿಗಲಿದೆ ಅವಕಾಶ?

ನವದೆಹಲಿ: ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಕೊನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.ಎಚ್,ಕೆ. ಪಾಟೀಲ್, ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲಕ್ಷ್ಮಣ […]

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಬಲಿ; ಅಪಾರ ಆಸ್ತಿ ಹಾನಿ!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಸಾವನ್ನಪ್ಪಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೇ, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ […]

Bengaluru Crime Just In Karnataka State

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದು

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕೆಡಬಾರದು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನೇನ್ ಮಾಡಿದೀರಾ ಅನ್ನೋದು ಗೊತ್ತಿದೆ. ಆ ತಪ್ಪು ರಿಪೀಟ್ ಮಾಡಬೇಡಿ. ಅಕ್ರಮ ಚಟುವಟಿಕೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ದ ಕ್ರಮ ಗೈಗೊಳ್ಳಬೇಕು […]

Bengaluru Just In Karnataka Politics State

ಅಧಿಕಾರಾವಧಿ ಪೂರ್ಣ ಆಗುವವರೆಗೂ ಸಿದ್ದರಾಮಯ್ಯ ಸಿಎಂ; ಎಂ.ಬಿ. ಪಾಟೀಲ್

Mysore : ಸಿದ್ದರಾಮಯ್ಯ(Siddaramaiah) ಅವರೇ ಲೋಕಸಭೆ ಚುನಾವಣೆಯ (LokSabha Elections) ನಂತರವೂ 5 ವರ್ಷಗಳ ಕಾಲ ಸಿಎಂ ಆಗಿ ಇರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಹೇಳಿದ್ದಾರೆ. ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರವೂ ಯಾವುದೇ […]

Bengaluru Just In Karnataka Politics State

UT Khadar: ಹಿರಿಯ ನಾಯಕ ಯು.ಟಿ. ಖಾದರ್ ಸ್ಪೀಕರ್ ಆಗಿ ಆಯ್ಕೆ!

Bangalore : ಕಾಂಗ್ರೆಸ್‌ ನ ಹಿರಿಯ ಶಾಸಕ (Congress MLA) ಯುಟಿ ಖಾದರ್‌ (UT Khader) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.ಯು.ಟಿ ಖಾದರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್‌ ಹುದ್ದೆ ಸ್ವೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‌ ಆದೇಶದ ಹಿನ್ನೆಲೆಯಲ್ಲಿ ಖಾದರ್‌ ಈ ಜವಾಬ್ದಾರಿ ಒಪ್ಪಿಕೊಂಡಿದ್ದು, ಇಂದು ಸ್ಪೀಕರ್‌ (Speaker) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ಆಯ್ಕೆಯಾಗಿರುವ ಖಾದರ್‌ 2007 ರಿಂದ 2012ರವರೆಗೆ […]

Bengaluru Just In Karnataka Politics State

DK Shivakumar: ಸಿದ್ದರಾಮಯ್ಯರ ಅದೃಷ್ಟದ ಮನೆಯೂ ನನಗೆ ಬೇಕು; ಡಿಕೆಶಿ!

Bangalore : ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ (DK Sivakumar)ಅವರ ಮಧ್ಯೆ ಸಿಎಂ ಸ್ಥಾನಕ್ಕೆ ದೊಡ್ಡ ಫೈಟ್ ನಡೆದಿತ್ತು. ಈ ಮಧ್ಯೆ ಸಿಎಂ ಸ್ದಾನ ಗೆಲ್ಲುವಲ್ಲಿ ಸಿದ್ದು ಯಶಸ್ವಿಯಾಗಿದ್ದರು. ಡಿಕೆಶಿ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಆದರೆ, ಅವರಿಗೆ ಯಾವಾಗಲೂ ಅದೃಷ್ಟದ ಮನೆ ಎಂದೇ ಹೇಳಲಾಗುತ್ತಿದ್ದ ಮನೆಯ ಮೇಲೆಯೂ ಈಗ ಡಿಕೆಶಿ ಕಣ್ಣು ಹಾಕಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಹಾಲಿ ಇರುವ ಕುಮಾರಕೃಪಾ (Kumarakrupa GuestHouse) ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ […]

Bengaluru Just In Karnataka Politics State

CM Siddaramaiah: ಸಭೆ- ಸಮಾರಂಭಗಳಲ್ಲಿ ಹಾರ- ತುರಾಯಿ ಬಳಸದಂತೆ ಸೂಚನೆ!

ಬೆಂಗಳೂರು : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಾನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಿ. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ […]

Bengaluru Just In Karnataka State

ಮೊಮ್ಮಗ ಪಿಯುಸಿ ಪಾಸ್ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ!

Bangalore : ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೊಮ್ಮಗ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರವನ್ನು ಮೊಮ್ಮಗ ಪಡೆದಿದ್ದಾನೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. […]