Kornersite

Bengaluru Just In Karnataka Politics State

MB Patil: ಚಿಕ್ಕ ವಯಸ್ಸಿನಲ್ಲಿಯೇ ವಿಧಾನಸಭೆ ಪ್ರವೇಶಿಸಿದ ನಾಯಕನಿಗೆ ಸಚಿವ ಸ್ಥಾನ

ವಿಜಯಪುರ: ಅತೀ ಚಿಕ್ಕ ವಯಸ್ಸಿನಲ್ಲಿಯೇ ಲಿಂಗಾಯತ ಸಮುದಾಯದ ಪ್ರಭಲ ನಾಯಕ ಎಂ.ಬಿ ಪಾಟೀಲ್‌ (M B Patil) ವಿಧಾನಸಭೆ ಪ್ರವೇಶಿಸಿದ್ದರು. ಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕ, ಜಲಸಂಪನ್ಮೂಲ ಸಚಿವರಾಗಿ ಈ ಹಿಂದೆ ಅಧಿಕಾರ ಅನುಭವಿಸಿದ್ದಾರೆ. ಈಗ ಅವರು, ಸತತ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಚಿವ ಸ್ಥಾನ ಅಲಂಕರಿಸಿದ್ದಾರೆ. 1964 ಅಕ್ಟೋಬರ್ 7 ರಂದು ಜನಿಸಿದ ಇವರು ರಾಜಕೀಯ ಹಿನ್ನೆಲೆ ಹೊಂದಿರುವ ಕುಟುಂಬದವರು. ತಂದೆ ಬಿ.ಎಂ ಪಾಟೀಲ್‌ ಕೂಡ ಶಾಸಕರಾಗಿದ್ದವರು. ಬಿಇ ಸಿವಿಲ್ […]

Bengaluru Just In Karnataka Politics State

ಎಲ್ಲ ಗ್ಯಾರಂಟಿಗಳಿಗೂ ಇಂದೇ ಅನುಮೋದನೆ; ಸಿಎಂ ಸಿದ್ದರಾಮಯ್ಯ ಘೋಷಣೆ!

Bangalore : ಸಿಎಂ ಆಗಿ ಸಿದ್ದರಾಮಯ್ಯ(Siddaramaiah) ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದರು, ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು. ಜೊತೆಗೆ ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಇಂದೇ ಅನುಮೋದನೆ ನೀಡುತ್ತೇನೆ ಎನ್ನುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು […]

Bengaluru Just In Karnataka Politics State

KJ George: ಹಿರಿಯ ನಾಯಕ ಕೆಜೆ ಜಾರ್ಜ್ ಗೆ ಒಲಿದು ಬಂದ ಸಚಿವ ಸ್ಥಾನ!

ಕ್ರಿಶ್ಚಿಯನ್ ಸಮುದಾಯದ ಕೆಜೆ ಜಾರ್ಜ್ (KJ George) ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿ.. ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಆಯ್ಕೆಯಾಗಿದ್ದಾರೆ. ಕೆಲಚಂದ್ರ ಜೋಸೆಫ್ ಜಾರ್ಜ್. ಕೆಜೆ ಜಾರ್ಜ್ ಅವರು 24 ಆಗಸ್ಟ್ 1949 ರಂದು ಈಗಿನ ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಕೆಲಚಂದ್ರ ಚಾಕೋ ಜೋಸೆಫ್ ಮತ್ತು ಮರಿಯಮ್ಮ ಜೋಸೆಫ್ ದಂಪತಿಗೆ ಜನಿಸಿದವರು. ಈ ಕುಟುಂಬ1960 ರ ದಶಕದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಗೆ ಸ್ಥಳಾಂತರಗೊಂಡು ನಂತರ ಬೆಂಗಳೂರಿಗೆ ಬಂದಿತು. ಕೆ.ಜೆ.ಜಾರ್ಜ್ ಅವರು 1968ರಲ್ಲಿ ಭಾರತೀಯ ರಾಷ್ಟ್ರೀಯ […]

Bengaluru Karnataka Politics State

KH Muniyappa: ರಾಜ್ಯದ ಹಿರಿಯ ರಾಜಕಾರಣಿಗೆ ಒಲಿದ ಸಚಿವ ಪಟ್ಟ

ರಾಜ್ಯ ರಾಜಕೀಯದ ಅತ್ಯಂತ ಹಿರಿಯ ರಾಜಕಾರಣ ಕೆ.ಹೆಚ್‌.ಮುನಿಯಪ್ಪ ಅವರು, 1960ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದಿದ್ದರು. ಸದ್ಯ ಅವರು ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ. ಇಂದು ನಡೆದ ಸಮಾರಂಭದಲ್ಲಿ ಕೆ.ಹೆಚ್. ಮುನಿಯಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಮಾರ್ಚ್‌ 07, 1948ರಲ್ಲಿ ಜನಿಸಿದ್ದ ಅವರಿಗೆ ಸದ್ಯ 75 ವರ್ಷ ವಯಸ್ಸು. ವಕೀಲರಾಗಿ ಕಾರ್ಯನಿರ್ವಹಿಸಿದ್ದು, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೆ.ಹೆಚ್ ಮುನಿಯಪ್ಪ ಮೊದಲಿಗೆ 1978-83 […]

Bengaluru Just In Karnataka Politics State

ಪಿಎಚ್ ಡಿ ಮಾಡಿ ರಾಜಕೀಯಕ್ಕೆ ಬಂದ ನಾಯಕ; ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟು, ಸಚಿವರಾದ ಕಥೆ!

ತುಮಕೂರು : ನೂತನ ಸಚಿವ ಸಂಪುಟದಲ್ಲಿ ಡಾ. ಜಿ ಪರಮೇಶ್ವರ(G Parameshwara) ಅವರು ಅವಕಾಶ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಡಾ. ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 1951 ಆಗಸ್ಟ್ 6ರಂದು ಜನಿಸಿರುವ ಪರಮೇಶ್ವರ್, ಪ್ರಾರಂಭಿಕ ವಿದ್ಯಾಭ್ಯಾಸದಿಂದ ಪಿಯುಸಿವರೆಗೆ ತಮ್ಮ ಸ್ವಂತ ಊರಿನಲ್ಲಿಯೇ ಓದುದ್ದಿದ್ದಾರೆ. ನಂತರ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂಎಸ್ಸಿ ಪದವಿ ಮುಗಿಸಿ, ನಂತರ ಅದೇ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದಾರೆ. ಸಸ್ಯ ಶರೀರಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿ, ನಂತರ, […]

Bengaluru Just In Karnataka Politics State

ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಸ್ವೀಕಾರ!

Bangalore: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಜನ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ […]

Bengaluru Just In Karnataka Politics State

ನಮ್ಮಲ್ಲಿ ಬಣ ರಾಜಕೀಯ ಇಲ್ಲ; ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ

Bangalore : ನಮ್ಮಲ್ಲಿ ಬಣ ರಾಜಕೀಯ ಇಲ್ಲ, ಕಾಂಗ್ರೆಸ್‌ ಹೈಕಮಾಂಡ್‌ (Congress High Command) ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನ ಹಿರಿಯ ನಾಯಕ ಎಂ.ಬಿ. ಪಾಟೀಲ್‌ (MB Patil) ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಮಾಣ ವಚನ (Swearing-In Ceremony) ಸ್ವೀಕರಿಸಲಿರುವ ಅವರು, ನನಗೆ ಇದೇ ಖಾತೆ ಬೇಕು ಎಂದು ಬೇಡಿಕೆ ಇಡುವುದಿಲ್ಲ. ಹೈಕಮಾಂಡ್‌ ಅಳೆದು ತೂಗಿ ಹಂಚಿಕೆ ಮಾಡಿದೆ. ಸಿಎಂ ಯಾವ ಖಾತೆ ಕೊಡುತ್ತದೆಯೋ ಅದನ್ನು […]

Bengaluru Just In Karnataka Politics State

ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮ; ಬೆಳಿಗ್ಗೆಯೇ ನೂಕುನುಗ್ಗಲು!

Bangalore : ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಕಂಠೀರವ ಸ್ಟೇಡಿಯಂ (Kanteerava Stadium) ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (ಮಧ್ಯಾಹ್ನ 12.30ರ ಸುಮಾರಿಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬಂದಿದೆ. ಸದ್ಯ ಸ್ಟೇಡಿಯಂನ ಪ್ರವೇಶ ದ್ವಾರ […]

Bengaluru Just In Karnataka Politics State

ಜೋಡೆತ್ತು ಸರ್ಕಾರ ರಚನೆಗೆ ಕ್ಷಣಗಣನೆ! ಇಂದು 8 ಜನ ಶಾಸಕರ ಪ್ರಮಾಣ ವಚನ ಸ್ವೀಕಾರ!

Bangalore : ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ‘ಜೋಡೆತ್ತು’ ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್‌ (DK Shivakumar) ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರೊಂದಿಗೆ 8 ಜನ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ಪಟ್ಟಿ ಅಂತಿಮಗೊಳಿಸುವುದಕ್ಕಾಗಿ ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿನ ಕೆ.ಸಿ. ವೇಣುಗೋಪಾಲ್ (K. C. Venugopal) ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದವು. ಪ್ರಮುಖ ಖಾತೆಗಳನ್ನು […]

Bengaluru Just In Karnataka Politics State

ಹೊಸ ಕಾರು ಖರೀದಿಸಿದ ಸಿದ್ದರಾಮಯ್ಯ; ಅದರ ಬೆಲೆ ಎಷ್ಟು ಗೊತ್ತಾ?

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷೆ ಮೀರಿ ಗೆಲುವು ಸಾಧಿಸಿದೆ. ಮ್ಯಾಜಿಕ್ ನಂಬರ್ ದಾಟಿ, ದೂರ ಸಾಗಿದೆ. ಹೀಗಾಗಿ ಬಹುಮತದ ಸರ್ಕಾರ ರಚಿಸಲು ಮುಂದಾಗಿದ್ದು, ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಗ್ಗಂಟು ಕೂಡ ಮುಗಿದಿದೆ. ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆಶಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ನಿಯೋಜಿತ ಸಿಎಂ ಹೊಸ ಕಾರು ಖರೀದಿಸಿದ್ದಾರೆ. ಮುಖ್ಯಮಂತ್ರಿ ಪಟ್ಟ ಸಿಗುತ್ತಿದ್ದಂತೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಟೋಯೋಟಾ ವೆಲ್‌ಫೈರ್ […]