Vande Bharat Express: ವಂದೇ ಭಾರತ್ ಎಕ್ಸಪ್ರೆಸ್ ಗೆ ಮತ್ತೆ ಕಲ್ಲು ತೂರಿದ ದುಷ್ಕರ್ಮಿಗಳು!
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಿದ್ದ ಕೇರಳದ (Kerala) ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಎಕ್ರ್ ಪ್ರೆಸ್ ರೈಲು, ತಿರುನಾವಯ ಹಾಗೂ ತಿರೂರ್ ಮಧ್ಯೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಒಂದು ಕೋಚ್ನ ವಿಂಡ್ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ರೈಲ್ವೇ […]